ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

ಬೆಳಗಾವಿ- ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಆಪ್ತ ಕಾರ್ಯದರ್ಶಿಗೆ ಸೇರಿದ ಕಾರು ಅಪಘಾತಕ್ಕೀಡಾದ ಪರಿಣಾಮ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಪಘಾತದಲ್ಲಿ ಸವದತ್ತಿ ಪಟ್ಟಣದ ನಿವಾಸಿ ಮಂಜುನಾಥ್ ಬೈರ್ನಟ್ಟಿ (30) ಮೃತಪಟ್ಟಿದ್ದಾನೆ. ಮಂಜುನಾಥ್ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಒಡೆತನದ ಹರ್ಷಾ ಸಕ್ಕರೆ ಕಾರ್ಖಾನೆಗೆ ಕೆಲಸಕ್ಕೆ ಹೊರಟಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ವೇಗವಾಗಿ ಬಂದ ಕಾರು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮಂಜುನಾಥ್ ತಲೆಗೆ ಗಂಭೀರ ಗಾಯಗಳಾಗಿ […]

ಮತ್ತಷ್ಟು ಓದಿ

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ- ಮ್ಯೂಸಿಕ್ ಮೈಲಾರಿ ವೈದ್ಯಕೀಯ ಪರಿಕ್ಷೆ

ಬಾಗಲಕೋಟೆ- ಮ್ಯೂಸಿಕ್ ಮೈಲಾರಿ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮೈಲಾರಪ್ಪ ಸಣ್ಣಕಲಕಪ್ಪ ಮಡಿವಾಳರ (29) ಅಲಿಯಾಸ್ ಮ್ಯೂಸಿಕ್ ಮೈಲಾರಿ ಅವರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದೆ. ಬನಹಟ್ಟಿಯಿಂದ ಕರೆತಂದ ಪೊಲೀಸರು ಆರೋಪಿಯನ್ನು ಬಾಗಲಕೋಟೆ ಜಿಲ್ಲಾ ಆಸ್ಪತ್ರೆಗೆ ಹಾಜರುಪಡಿಸಿ ವೈದ್ಯಕೀಯ ಪರೀಕ್ಷೆ ನಡೆಸಿದ್ದಾರೆ. ನ್ಯಾಯಾಲಯಕ್ಕೆ ಹಾಜರುಪಡಿಸುವ ಮುನ್ನ ಕಾನೂನು ಪ್ರಕ್ರಿಯೆಯ ಭಾಗವಾಗಿ ಈ ವೈದ್ಯಕೀಯ ತಪಾಸಣೆ ಮಾಡಲಾಗಿದೆ. ವೈದ್ಯಕೀಯ ಪರೀಕ್ಷೆ ವೇಳೆ ಆರೋಪಿಯಿಂದ ರಕ್ತದ ಮಾದರಿ ಮತ್ತು ಕೂದಲಿನ ಮಾದರಿ ಸಂಗ್ರಹಿಸುವ ಸಾಧ್ಯತೆ ಇದ್ದು, ಪ್ರಕರಣಕ್ಕೆ ಸಂಬಂಧಿಸಿದ […]

ಮತ್ತಷ್ಟು ಓದಿ

ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರ್- ಲೋಕಾಯುಕ್ತ ಇನ್ಸಪೆಕ್ಟರ್ ಸಜೀವ ದಹನ!

ಧಾರವಾಡ- ರಸ್ತೆ ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದು ಬೆಂಕಿ ಹೊತ್ತಿದ್ದು, ಕಾರಿನಲ್ಲಿ ಇದ್ದ ಲೋಕಾಯುಕ್ತ ಇನ್ಸಪೆಕ್ಟರ್ ಸಜೀವ ದಹನ ಆಗಿದ್ದಾರೆ. ಧಾರವಾಡ ಜಿಲ್ಲೆಯ ಅಣ್ಣಿಗೇರಿ ಬಳಿಯ ಭದ್ರಾಪುರ ಕ್ರಾಸ್ ನಲ್ಲಿ ಘಟನೆ ನಡೆದಿದೆ. ಹಾವೇರಿ ಲೋಕಾಯುಕ್ತ ಇನ್ಸಪೆಕ್ಟರ್ ಸಾಲಿಮಠ ಸ್ಥಳದಲ್ಲಿಯೇ ಸಜೀವ ದಹನವಾಗಿದ್ದು, ಕಾರಿನಲ್ಲಿ ಇದ್ದವರ ಗುರುತು ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಗದಗ ನಗರದಿಂದ ರಸ್ತೆ ಮಾರ್ಗವಾಗಿ ಹುಬ್ಬಳ್ಳಿಗೆ ಬರುತ್ತಿದ್ದ ವೇಳೆ ದುರಂತ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿಯ ಮೇಲೆ ಐ-20 ಕಾರು ಡಿವೈಡರ್ ಗೆ ಡಿಕ್ಕಿ […]

ಮತ್ತಷ್ಟು ಓದಿ

ಬೆಳಗಾವಿಯಲ್ಲಿ ಕುಳಿತು ಅಮೆರಿಕ ಪ್ರಜೆಗಳಿಗೆ ಸೈಬರ್ ವಂಚನೆ- ಪ್ರಕರಣ ಸಿಐಡಿಗೆ ಹಸ್ತಾಂತರ

ಬೆಳಗಾವಿ- ಬೆಳಗಾವಿಯಲ್ಲಿ ಇತ್ತೀಚಿಗೆ ಬೃಹತ್ ಸೈಬರ್ ವಂಚನೆ ಜಾಲ ಪತ್ತೆಯಾಗಿತ್ತು. ಬೆಳಗಾವಿಯಲ್ಲಿ ಕುಳಿತು ಅಮೆರಿಕ ಪ್ರಜೆಗಳಿಗೆ ವಂಚನೆ ಮಾಡುತ್ತಿದ್ದ ಜಾಲವನ್ನು ಇಲ್ಲಿನ ಪೊಲೀಸರು ಬೇಧಿಸಿದ್ರು. 28 ಜನ ಆರೋಪಿಗಳನ್ನು ಬಂಧಿಸಿ 37 ಲ್ಯಾಪ್ ಟಾಪ್ ವಶಕ್ಕೆ ಪಡೆಯಲಾಗಿತ್ತು. ಈ ಪ್ರಕರಣ ಅಂತರಾಷ್ಟ್ರೀಯ ಜಾಲ ಹೊಂದಿದ್ದ ಕಾರಣಕ್ಕೆ ಈ ಕೇಸ್ ಸಿಐಡಿಗೆ ಹಸ್ತಾಂತರ ಮಾಡಲಾಗಿದೆ. ಈ ಬಗ್ಗೆ ನಗರ ಪೊಲೀಸ್ ಆಯುಕ್ತ ಭೂಷಣ್ ಗುಲಾಬರಾವ್ ಬೊರಸೆ ಮಾಹಿತಿ ನೀಡಿದ್ದಾರೆ. ಬೆಳಗಾವಿಯ ಅಜಂನ ನಗರ ಕಾಲ್ ಸೆಂಟರ್ ಮೇಲೆ ದಾಳಿ […]

ಮತ್ತಷ್ಟು ಓದಿ