ಅಭಿವೃದ್ಧಿ, ಇಲ್ಲವೇ ಪ್ರತ್ಯೇಕ ರಾಜ್ಯ – ಶಾಸಕ ರಾಜು ಕಾಗೆ ಅವಾಜ್

ಬೆಳಗಾವಿ- ಉತ್ತರ ಕರ್ನಾಟಕ ಅಭಿವೃದ್ಧಿ ವಿಷಯದಲ್ಲಿ ಸರ್ಕಾರದ ವಿರುದ್ಧ ಮತ್ತೊಮ್ಮೆ ಶಾಸಕ ರಾಜು ಕಾಗೆ ಗಟ್ಟಿಯಾದ ಧ್ವನಿ ಎತ್ತಿದ್ದಾರೆ. ಉತ್ತರ ಕರ್ನಾಟಕಕ್ಕೆ ಸಮರ್ಪಕ ಅಭಿವೃದ್ಧಿ ಒದಗಿಸಬೇಕು, ಇಲ್ಲದಿದ್ದರೆ ಪ್ರತ್ಯೇಕ ರಾಜ್ಯದ ಬೇಡಿಕೆ ಅನಿವಾರ್ಯ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬೆಳಗಾವಿಯ ಓಲ್ಡ್ ಪಿಬಿ ರಸ್ತೆಯಲ್ಲಿ ನಡೆಯುತ್ತಿರುವ ಹೋರಾಟದಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ರಾಜು ಕಾಗೆ, “ಉತ್ತರ ಕರ್ನಾಟಕದ ಅಭಿವೃದ್ಧಿ ವಿಚಾರದಲ್ಲಿ ತಾರತಮ್ಯ ಮುಂದುವರಿದಿದೆ. ಇದನ್ನು ತಕ್ಷಣವೇ ಹೋಗಲಾಡಿಸಬೇಕು. ಕಿತ್ತೂರು ಕರ್ನಾಟಕ ಭಾಗಕ್ಕೆ ಸಮಾನ ಅಭಿವೃದ್ಧಿ […]

ಮತ್ತಷ್ಟು ಓದಿ

ಚಿಕ್ಕೋಡಿ, ಗೋಕಾಕ್ ಜಿಲ್ಲೆ ರಚನೆ, ಅಭಿಪ್ರಾಯ ಸಂಗ್ರಹಿಸಿ ಕ್ರಮ– ಸಚಿವ ಕೃಷ್ಣ ಭೈರೇಗೌಡ

ಬೆಳಗಾವಿ– ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಚಿಕ್ಕೋಡಿ ಮತ್ತು ಗೋಕಾಕ್ ಗಳನ್ನು ನೂತನ ಜಿಲ್ಲೆಗಳನ್ನಾಗಿ ಘೋಷಿಸುವ ಸಂಬಂಧಪಟ್ಟಂತೆ ಅಭಿಪ್ರಾಯ ಸಂಗ್ರಹಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ವಿಧಾನಸಭೆಯಲ್ಲಿ ತಿಳಿಸಿದರು. ಐಹೊಳೆ ದುರ್ಯೋಧನ ಮಹಾಲಿಂಗಪ್ಪ ಅವರ ಸರ್ಕಾರದ ಗಮನ ಸೆಳಯುವ ಸೂಚನೆಗೆ ಉತ್ತರಿಸಿದ ಸಚಿವರು ದೊಡ್ಡ ಜಿಲ್ಲೆಗಳನ್ನು ಆಡಳಿತಾತ್ಮಕವಾಗಿ ನಿರ್ವಹಣೆ ಮಾಡುವುದು ಕಷ್ಟ. ಇದರಿಂದಾಗಿ ಜನಪರ ಆಡಳಿತ ಕೊಡುವುದು ಕಷ್ಟಸಾಧ್ಯವೆಂಬುದು ಸರ್ಕಾರದ ಗಮನಕ್ಕೆ ಬಂದಿದೆ. ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಎರಡು ಅಥವಾ ಮೂರು ನೂತನ […]

ಮತ್ತಷ್ಟು ಓದಿ

ಗೋಕಾಕ, ಚಿಕ್ಕೋಡಿ ಜಿಲ್ಲಾ ಕೇಂದ್ರಗಳನ್ನಾಗಿ ಘೋಷಿಸುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಆಗ್ರಹ

ಗೋಕಾಕ- ಭೌಗೋಳಿಕವಾಗಿ ದೊಡ್ಡದಿರುವ ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಗೋಕಾಕ ಮತ್ತು ಚಿಕ್ಕೋಡಿ ತಾಲ್ಲೂಕು ಕೇಂದ್ರಗಳನ್ನು ಹೊಸ ಜಿಲ್ಲಾ ಕೇಂದ್ರಗಳನ್ನಾಗಿ ಘೋಷಿಸುವಂತೆ ಅರಭಾವಿ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಮುಖ್ಯಮಂತ್ರಿಗಳನ್ನು ಆಗ್ರಹಿಸಿದ್ದಾರೆ. ಸುಮಾರು 40 ವರ್ಷಗಳಿಂದ ಗೋಕಾಕ ಜಿಲ್ಲಾ ರಚನೆಗಾಗಿ ನಮ್ಮವರು ಅನೇಕ ಹೋರಾಟಗಳನ್ನು ಮಾಡುತ್ತಿದ್ದಾರೆ. ಹಿಂದಿನ ಸರ್ಕಾರಗಳು ಜಿಲ್ಲಾ ರಚನೆಗಾಗಿ ನೇಮಿಸಿದ್ದ ನಾಲ್ಕೂ ಆಯೋಗಗಳು ಸಹ ಆಡಳಿತದ ಹಿತದೃಷ್ಟಿಯಿಂದಬೆಳಗಾವಿಯನ್ನು ವಿಭಜಿಸಿ ಹೊಸ ಜಿಲ್ಲೆಗಳನ್ನು ರಚನೆ ಮಾಡುವಂತೆಯೂ ಅಂದಿನ ಸರ್ಕಾರಗಳಿಗೆ ಶಿಫಾರಸ್ಸು ಮಾಡಿದ್ದವು. ಗೋಕಾಕ ಜಿಲ್ಲಾ […]

ಮತ್ತಷ್ಟು ಓದಿ

ಬೆಳಗಾವಿ ಅಧಿವೇಶನದ ಮೊದಲ ದಿನವೇ ಸರ್ಕಾರದ ವಿರುದ್ಧ ಹೋರಾಟ- ಶಾಸಕ ಬಾಲಚಂದ್ರ ಜಾರಕಿಹೊಳಿ

ಬೆಳಗಾವಿಯಲ್ಲಿ ನಡೆದ ಬಿಜೆಪಿ ಕೋರ್ ಕಮಿಟಿಯಲ್ಲಿ ನಿರ್ಣಯ ಬೆಳಗಾವಿ- ಡಿಸೆಂಬರ್ 9 ರಂದು ಬೆಳಗಾವಿಯಲ್ಲಿ ಬಿಜೆಪಿ ನೇತೃತ್ವದಲ್ಲಿ ರೈತರ ಹೋರಾಟ ನಡೆಯಲಿದೆ. 20 ಸಾವಿರಕ್ಕೂ ಹೆಚ್ಚು ರೈತರು ರಾಜ್ಯಾದ್ಯಂತ ಬರಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ, ಆರ್. ಅಶೋಕ ನೇತೃತ್ವದಲ್ಲಿ ಹೋರಾಟ ಮಾಡ್ತಿವಿ ಎಂದು ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ‌. ಕಾಂಗ್ರೆಸ್ ಸರ್ಕಾರ ಕುರ್ಚಿ ಉಳಿಸಿಕೊಳ್ಳಲು ಸಮಯ ಹಾಳು ಮಾಡುತ್ತಿದೆ. ರೈತರಿಗೆ ನ್ಯಾಯ ಒದಗಿಸಲು ನಾವು ಹೋರಾಟ ಮಾಡ್ತಿವಿ. ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗೆ […]

ಮತ್ತಷ್ಟು ಓದಿ

ಬೆಳಗಾವಿಯ ಸುವರ್ಣ ಸೌಧದ ಸುತ್ತಮುತ್ತ ನಾಳೆಯಿಂದಲೇ ನಿಷೇಧಾಜ್ಞೆ ಜಾರಿ!

ಬೆಳಗಾವಿ- ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಇದೇ ಡಿಸೆಂಬರ್ 8ರಿಂದ 21ರ ವರೆಗೆ ಚಳಿಗಾಲದ ಅಧಿವೇಶನಕ್ಕೆ ಈಗಾಗಲೇ ಮೂಹುರ್ತ ನಿಗದಿಯಾಗಿದೆ. ಈ ಹಿನ್ನೆಲೆಯಲ್ಲಿ ನಾಳೆಯಿಂದಲೇ ಸುವರ್ಣ ಸೌಧದ ಸುತ್ತಮುತ್ತ ಮೂರು ಕಿ ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಈ ಬಗ್ಗೆ ನಗರ ಪೊಲೀಸ್ ಆಯುಕ್ತ ಭೂಷಣ್ ಗುಲಾಬರಾವ್ ಬೊರಸೆ ಆದೇಶ ಹೊರಡಿಸಿದ್ದಾರೆ. ಬೆಳಗಾವಿಯ ಅಧಿವೇಶನ ಸಂದರ್ಭದಲ್ಲಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ವಿವಿಧ ಸಂಘ- ಸಂಸ್ಥೆಗಳು ರೆಡಿಯಾಗಿವೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತ ನಗರ ಪೊಲೀಸ್ ಆಯುಕ್ತರು ನಾಳೆಯಿಂದಲೇ ಡಿಸೆಂಬರ್ […]

ಮತ್ತಷ್ಟು ಓದಿ

ಬೆಳಗಾವಿಯಲ್ಲಿ ಕುಳಿತು ಅಮೆರಿಕ ಪ್ರಜೆಗಳಿಗೆ ಸೈಬರ್ ವಂಚನೆ- ಪ್ರಕರಣ ಸಿಐಡಿಗೆ ಹಸ್ತಾಂತರ

ಬೆಳಗಾವಿ- ಬೆಳಗಾವಿಯಲ್ಲಿ ಇತ್ತೀಚಿಗೆ ಬೃಹತ್ ಸೈಬರ್ ವಂಚನೆ ಜಾಲ ಪತ್ತೆಯಾಗಿತ್ತು. ಬೆಳಗಾವಿಯಲ್ಲಿ ಕುಳಿತು ಅಮೆರಿಕ ಪ್ರಜೆಗಳಿಗೆ ವಂಚನೆ ಮಾಡುತ್ತಿದ್ದ ಜಾಲವನ್ನು ಇಲ್ಲಿನ ಪೊಲೀಸರು ಬೇಧಿಸಿದ್ರು. 28 ಜನ ಆರೋಪಿಗಳನ್ನು ಬಂಧಿಸಿ 37 ಲ್ಯಾಪ್ ಟಾಪ್ ವಶಕ್ಕೆ ಪಡೆಯಲಾಗಿತ್ತು. ಈ ಪ್ರಕರಣ ಅಂತರಾಷ್ಟ್ರೀಯ ಜಾಲ ಹೊಂದಿದ್ದ ಕಾರಣಕ್ಕೆ ಈ ಕೇಸ್ ಸಿಐಡಿಗೆ ಹಸ್ತಾಂತರ ಮಾಡಲಾಗಿದೆ. ಈ ಬಗ್ಗೆ ನಗರ ಪೊಲೀಸ್ ಆಯುಕ್ತ ಭೂಷಣ್ ಗುಲಾಬರಾವ್ ಬೊರಸೆ ಮಾಹಿತಿ ನೀಡಿದ್ದಾರೆ. ಬೆಳಗಾವಿಯ ಅಜಂನ ನಗರ ಕಾಲ್ ಸೆಂಟರ್ ಮೇಲೆ ದಾಳಿ […]

ಮತ್ತಷ್ಟು ಓದಿ